Get Even More Visitors To Your Blog, Upgrade To A Business Listing >>

Karnataka Breaking Kannada News Live: ರೇಷ್ಮೆ ಸೀರೆ ಬೆಲೆ ಕೇಳಿ ಅಚ್ಚರಿ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ viral news


  • 16 Oct 2023 08:55 AM (IST)

    Karnataka Breaking News Live: ಗುಂಡಿ ನೋಡಿ ಮುಚ್ಚೋ ಕೆಲಸ ಮಾಡಿದ ಮಕ್ಕಳು

    ಧಾರವಾಡ ಜಿಲ್ಲೆಯಲ್ಲಿ ರಸ್ತೆಗಳು ಹದಗೆಟ್ಟಿವೆ. ರಸ್ತೆ ದುರಸ್ತಿ ಮಾಡದೇ ಲೋಕೋಪಯೋಗಿ ಇಲಾಖೆ ನಿರ್ಲಕ್ಷ ತೋರುತ್ತಿದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ದಾಸನಕೊಪ್ಲ-ಉಪ್ಪಿನ ಬೆಟಗೇರಿ ರಸ್ತೆಯಲ್ಲಿ ಗುಂಡಿ ಬಿದ್ದಿರುವುದನ್ನು ನೋಡಿದ ಮಕ್ಕಳು ಅದನ್ನು ಮುಚ್ಚುವ ಕೆಲಸ ಮಾಡಿದ್ದಾರೆ. ವಾಯು ವಿಹಾರಕ್ಕೆ‌ ಬಂದ ಮಕ್ಕಳು ಗುಂಡಿ ನೋಡಿ ಮುಚ್ಚೋ ಕೆಲಸ ಮಾಡಿದ್ದಾರೆ.

  • 16 Oct 2023 08:30 AM (IST)

    Karnataka Breaking News Live: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಪ್ರತಿಭಟನೆ

    ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್​ಗೂ ಸಂಬಂಧವಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ನೈತಿಕ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿ ಬಿಜೆಪಿ ಮುಂದಾಗಿದೆ.

  • 16 Oct 2023 08:28 AM (IST)

    Karnataka Breaking News Live: ಪ್ರೊ.ಭಗವಾನ್‌ ವಿರುದ್ಧದ ಪ್ರತಿಭಟನೆ ಕೈಬಿಟ್ಟ ರಾಜ್ಯ ಒಕ್ಕಲಿಗ ಪಡೆ

    ಮೈಸೂರು ದಸರಾ ಯುವ ಕವಿಗೋಷ್ಠಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್‌ ಬದಲು ಸಾಹಿತಿ ಡಾ.ಡಿ.ಕೆ.ರಾಜೇಂದ್ರ ಮೂಲಕ ಉದ್ಘಾಟನೆ ಮಾಡಲು ಚಿಂತಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದಿಂದ ಪ್ರೊ.ಭಗವಾನ್‌ ಹೆಸರು ಕೈಬಿಟ್ಟ ಹಿನ್ನೆಲೆ ಪ್ರೊ.ಭಗವಾನ್‌ ವಿರುದ್ಧ ಕರೆ ನೀಡಿದ್ದ ಪ್ರತಿಭಟನೆಯನ್ನು ಒಕ್ಕಲಿಗಪಡೆ ಹಿಂಪಡೆದಿದೆ.

  • 16 Oct 2023 08:03 AM (IST)

    Karnataka Breaking News Live: ರೇಷ್ಮೆ ಸೀರೆ ಬೆಲೆ ಕೇಳಿ ಅಚ್ಚರಿ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

    ನಿನ್ನೆ ಮೈಸೂರು ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ರೇಷ್ಮೆ ಸೀರೆ ಬೆಲೆ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದರು. ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ ಒಂದು ರೌಂಡ್ ಹಾಕಿದ ಸಿಎಂ ಸಿದ್ದರಾಮಯ್ಯ ರೇಷ್ಮೆ ಸೀರೆ ಅಂಗಡಿಗೆ ಭೇಟಿ ನೀಡಿದರು. ಈ ವೇಳೆ ರೇಷ್ಮೆ ಸೀರೆ ಬೆಲೆ ಕೇಳಿದ್ದು ಒಂದು ಸೀರೆಗೆ 20 ಸಾವಿರ ರೂಪಾಯಿ ಎಂದು ಅಂಗಡಿಯವರು ಉತ್ತರಿಸಿದ್ದಾರೆ. ರೇಷ್ಮೆ ಸೀರೆ ಬೆಲೆ ಕೇಳಿ ಸಿಎಂ ಒಂದು ಕ್ಷಣ ಅಚ್ಚರಿ ವ್ಯಕ್ತಪಡಿಸಿದರು.

    ಸಿಎಂ ಸಿದ್ದರಾಮಯ್ಯ

  • 16 Oct 2023 08:01 AM (IST)

    Karnataka Breaking News Live: ಇಂದಿನಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ

    ಇಂದಿನಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಗಜಪಡೆ ಆಗಮಿಸಿದ್ದು ಶ್ರೀರಂಗನಾಥಸ್ವಾಮಿ ದೇವಸ್ಥಾನದ ಬಳಿ 3 ಆನೆಗಳಿಗೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಪೂಜೆ ಸಲ್ಲಿಸಿದ್ದಾರೆ. ಮಹೇಂದ್ರ, ಲಕ್ಷ್ಮೀ, ವಿಜಯ ಆನೆಗಳಿಗೆ ಜಿಲ್ಲಾಡಳಿತ ಕಬ್ಬು, ಬೆಲ್ಲ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದೆ.

  • 16 Oct 2023 07:58 AM (IST)

    Karnataka Breaking News Live: ವಿಶ್ವವಿಖ್ಯಾತ ಮೈಸೂರು ದಸರಾ 2ನೇ ದಿನದ ಕಾರ್ಯಕ್ರಮಗಳ ವಿವರ

    ದಸರಾ ಅಂಗವಾಗಿ ಇಂದು ನಡೆಯುವ ಕಾರ್ಯಕ್ರಮಗಳ ವಿವರ ಹೀಗಿದೆ.


  • Source



    This post first appeared on , please read the originial post: here

    Share the post

    Karnataka Breaking Kannada News Live: ರೇಷ್ಮೆ ಸೀರೆ ಬೆಲೆ ಕೇಳಿ ಅಚ್ಚರಿ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ viral news

    ×

    Subscribe to

    Get updates delivered right to your inbox!

    Thank you for your subscription

    ×